Skip to content
saarathilive

saarathilive

Your brand our Voice

  • Home
  • Our Channel
  • Services
  • E-store
  • News
  • About

ಕವಿ ಕಂಡ ಯುಗಾದಿ-2025 ಕವನ ಸಂಕಲನ ಬಿಡುಗಡೆ:ಸಾಹಿತ್ಯದ ಮೂಲಕ ಸಂಸ್ಕೃತಿ ಮಹತ್ವ ಸಾರಬೇಕು: ಎಸ್.ಎನ್. ಚನ್ನಬಸಪ್ಪ(ಚೆನ್ನಿ)

Posted on April 1, 2025April 1, 2025 By Saarathi Live No Comments on ಕವಿ ಕಂಡ ಯುಗಾದಿ-2025 ಕವನ ಸಂಕಲನ ಬಿಡುಗಡೆ:ಸಾಹಿತ್ಯದ ಮೂಲಕ ಸಂಸ್ಕೃತಿ ಮಹತ್ವ ಸಾರಬೇಕು: ಎಸ್.ಎನ್. ಚನ್ನಬಸಪ್ಪ(ಚೆನ್ನಿ)
Local News, News
Spread the love


ಶಿವಮೊಗ್ಗ: ಭಾರತೀಯ ಸಂಸ್ಕೃತಿ ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠವಾದದ್ದು. ಇಂತಹ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೂ ರವಾನಿಸಬೇಕು. ಸಾಹಿತ್ಯದ ಮೂಲಕ ಸಂಸ್ಕೃತಿಯ ಮಹತ್ವ ಸಾರಬೆಕೆಂದು ಶಾಸಕ, ಸಹಚೇತನ ನಾಟ್ಯಾಲಯದ ಗೌರವಾಧ್ಯಕ್ಷರಾದ ಎಸ್.ಎನ್. ಚನ್ನಬಸಪ್ಪ ಕರೆ ನೀಡಿದರು.
ಸಹಚೇತನ ನಾಟ್ಯಾಲಯದ ವತಿಯಿಂದ ನಗರದಲ್ಲಿ 30-03-2025ರ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಯುಗಾದಿ ಅಂಗವಾಗಿ ಪ್ರಕಟಿಸಿರುವ 15ನೇ ವರ್ಷದ ಕವಿ ಕಂಡ ಯುಗಾದಿ-2025 ಕವನ ಸಂಕಲನ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಭಾರತೀಯ ಸಮಾಜ ವೈವಿಧ್ಯತೆಯಿಂದ ಸಮೃದ್ಧವಾಗಿದೆ. ಸಂಪ್ರದಾಯ, ನಂಬಿಕೆ, ಪದ್ಧತಿ ಮತ್ತು ಮೌಲ್ಯಗಳು ನಮ್ಮ ಸಂಸ್ಕೃತಿಯ ಶ್ರೀಮಂತಿಕೆಯನ್ನು ಕಾಪಾಡಲು ಸಹಾಯ ಮಾಡುತ್ತದೆ. ವಿವಿಧ ಧರ್ಮಗಳು, ಉಪಭಾಷೆಗಳು, ಭೌಗೋಳಿಕ ಸ್ಥಳ, ಭೌಗೋಳಿಕ ಗಡಿಗಳು ಮತ್ತು ಸಾಮಾಜಿಕ ಸಾಮರಸ್ಯದ ಏಕತೆಯು ಭಾರತೀಯ ಸಮಾಜದ ಪ್ರಮುಖ ಲಕ್ಷಣಗಳಲ್ಲಿ ಒಂದಾಗಿದೆ ಎಂದರು.
ಭಾರತೀಯ ಸಂಸ್ಕೃತಿಯಲ್ಲಿ ವಿವಿಧ ಆಚರಣೆಗಳನ್ನು ಆಚರಣೆಗಳಿವೆ. ವಿವಿಧ ಪ್ರದೇಶಗಳು ವಿಭಿನ್ನ ಹಬ್ಬಗಳನ್ನು ವಿಶಿಷ್ಟ ಶೈಲಿಯೊಂದಿಗೆ ಆಚರಿಸುತ್ತವೆ. ಅವು ಕಾಲೋಚಿತ ಪ್ರಕೃತಿಯಲ್ಲಿರುತ್ತವೆ ಮತ್ತು ಹವಾಮಾನಕ್ಕೆ ಸಂಬಂಧಿಸಿವೆ. ಯುಗಾದಿ ಕೂಡ ಇದರಲ್ಲಿ ಪ್ರಮುಖವಾದುದು ಎಂದು ತಿಳಿಸಿದರು.
ಭಾರತೀಯ ಸಂಪ್ರದಾಯದಲ್ಲಿ ನಂಬಿಕೆಗಳು, ಆಚರಣೆಗಳು ಮತ್ತು ಪಾಕಪದ್ಧತಿ ಎಂಬ ಅಂಸಗಳಿವೆ. ಅದರ ಇತಿಹಾಸದೊಂದಿಗೆ ಭಾರತೀಯ ಸಂಸ್ಕೃತಿಯ ಸಾರವನ್ನು ರೂಪಿಸಲು ಸಹಾಯ ಮಾಡಿದೆ. ಭಾರತೀಯ ಸಂಪ್ರದಾಯಗಳ ನಡುವೆ ಹೆಚ್ಚಿನ ಪ್ರಮಾಣದ ವೈವಿಧ್ಯತೆ ಮತ್ತು ಸಾಮ್ಯತೆಗಳಿರುವುದು ನಮ್ಮ ಸಂಸ್ಕೃತಿಯ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುತ್ತದೆ ಎಂದರು.
ಸಹಚೇತನ ನಾಟ್ಯಾಲಯವು ಕಳೆದ 14 ವರ್ಷಗಳಿಂದ ಹೊರತಂದಿರುವ ಕವಿ ಕಂಡ ಯುಗಾದಿ ಕವನ ಸಂಕಲನವು ಸಂಗ್ರಹ ಯೋಗ್ಯವಾಗಿವೆ. ಪುಸ್ತಕ ಓದುವ ಅಭಿರುಚಿ ಕಡಿಮೆಯಾಗುತ್ತಿದೆ ಎಂಬ ವಾತಾವರಣದ ನಡುವೆಯೂ ನಿರಂತರವಾಗಿ ಕವನ ಸಂಕಲನ ಹೊರತರುವ ಮೂಲಕ ಸಹಚೇತನ ನಾಟ್ಯಾಲಯವು ತನ್ನದೇ ಆದಂತಹ ಕೊಡುಗೆ ನೀಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಚೇತನ್, ಸಹನಾ ಚೇತನ್, ಡಾ. ನಾಗಮಣಿ, ಆನಂದ ರಾಮ್, ವಿನಯ್, ಉಷಾರಾಣಿ, ಮಾಲತೇಶ್, ದಿನೇಶ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

Post navigation

❮ Previous Post: ಬದುಕ ಬವಣೆಗಿದು ನಿತ್ಯದ ಉಡಿ… “ಚೋಮನ ದುಡಿ” – ನಾಟಕ”
Next Post: ಶಿವಮೊಗ್ಗದ ಕು. ಬಿ.ಎಂ. ಮೇಘನಾ ಐಎಎಸ್ ಪರೀಕ್ಷೆಯಲ್ಲಿ 421 ರ್‍ಯಾಂಕ್  ಗಳಿಸಿ ತೇರ್ಗಡೆ. ❯

You may also like

Local News
17ರ ಶನಿವಾರ ಹಿರಿಯೂರು ಕೃಷ್ಣಮೂರ್ತಿ ಸಂಸ್ಮರಣ ಗ್ರಂಥ ‘ಕೃಷ್ಣಸ್ಮೃತಿ ಬಿಡುಗಡೆ
May 15, 2025
News
0x1c8c5b6a
September 4, 2025
Local News
ಅದ್ಭುತ ಸಂಘಟಕ ‘ಮರೆಯಲಾಗದ ಮೇಷ್ಟ್ರು’ಶ್ರೀ ಹಿರಿಯೂರು ಕೃಷ್ಣಮೂರ್ತಿಗಳ ಸವಿನೆನಪು
May 16, 2025
Local News
“ಸಂವಿಧಾನ ಸನ್ಮಾನ ಮತ್ತು ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ”
February 4, 2025

Leave a Reply Cancel reply

Your email address will not be published. Required fields are marked *

Recent Posts

  • 0x1c8c5b6a
  • 0x1c8c5b6a
  • 0x1c8c5b6a
  • 0xc79c1e07
  • ಮನುಷ್ಯನ ದುಃಖಕ್ಕೆ ಅಜ್ಞಾನವೇ ಕಾರಣ – ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು

Recent Comments

  1. Chethan S. on ಆತ್ಮೀಯವಾದ ಆಮಂತ್ರಣ – ಸಹಚೇತನ ನಾಟ್ಯಾಲಯ (ರಿ.), ಶಿವಮೊಗ್ಗ

Archives

  • September 2025
  • August 2025
  • May 2025
  • April 2025
  • March 2025
  • February 2025
  • January 2025

Categories

  • International news
  • Local News
  • National News
  • News
  • Promotions
  • Home
  • Our Channel
  • Services
  • E-store
  • News
  • About

Copyright © 2025 saarathilive.

Theme: Oceanly News by ScriptsTown

Go to mobile version